ಬೆಂಗಳೂರು: ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ಹಲವರು ಹಲವಾರು ರೀತಿಯಲ್ಲಿ ಪ್ರತಿಭಟನೆಗಳನ್ನು ಮಾಡುತ್ತಾ, ಚರ್ಚೆಗಳನ್ನು ನಡೆಸುತ್ತಿದ್ದಾರೆ. ಆದರೆ ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಯ್ಯೂಟೂಬರ್ ಮೇಲೆ ಹಲ್ಲೆಯನ್ನು ನಡೆಸಿರುವುದು ಖಂಡನೀಯವೆಂದು ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ
ಸೌಜನ್ಯಾಳ ಹತ್ಯೆ ಪ್ರಕರಣಕ್ಕೆ ನ್ಯಾಯವನ್ನು ಒದಗಿಸಲು ಹೋಗಿರುವ ಯ್ಯೂಟೂಬರ್ಗಳ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಮತ್ತು ಬಹುಭಾಷಾ ನಟ ಪ್ರಕಾಶ್ ರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯ್ಯೂಟೂಬರ್ ಮೇಲೆ ಹಲ್ಲೆ ಮಾಡಿರುವದನ್ನು ಖಂಡಿಸಿ ವಿಡಿಯೋವೊಂದನ್ನು ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿದ್ದಾರೆ.
