ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡಳನ್ನು ಅರೆಸ್ಟ್ ಮಾಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಕ್ಯಾನ್ಸಲ್ ಮಾಡಿದೆ. ಬೆಂಗಳೂರಿನ ರಾಜಾಜಿನಗರದ ನಿವಾಸಕ್ಕೆ ತೆರಳಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಕೋರ್ಟ್ ತೀರ್ಪು ಕೊಡುವ ಮೊದಲು ದೇವರ ಮೋರೆಹೋಗಿರುವ ಪವಿತ್ರಾಗೌಡ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಕೋರ್ಟ್ ತೀರ್ಪು ನೀಡಿದ ನಂತರ ಪೊಲೀಸರು ಬಂಧಿಸಿದ್ದಾರೆ.

