ರಾಮನಗರ: ಕೆಎಸ್ಆರ್ಟಿಸಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬಸ್ ಸಂಚಾರ ಪ್ರಾರಂಭೋತ್ಸವಕ್ಕೆ ಸಚಿವರಾದ ರಾಮಲಿಂಗಾರೆಡ್ಡಿ ಚಾಲನೆಯನ್ನು ನೀಡಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಬಸ್ ನಿಲ್ದಾಣಕ್ಕೆ ಜಮೀನು ನೀಡಿದರೆ ಬಸ್ ನಿಲ್ದಾಣವನ್ನು ಮಾಡಿಕೊಡಲಾಗುತ್ತದೆ.ಈಗಾಗಲೇ ನಿರ್ಮಾಣವಾಗಿರುವ ನಿಲ್ದಾಣವನ್ನು ಶೀಘ್ರದಲ್ಲಿ ನವೀಕರಿಸಲಾಗುತ್ತದೆ ಎಂದು ಭರವಸೆಯನ್ನು ನೀಡಿದ್ದಾರೆ.
ರಾಮನಗರದಲ್ಲಿ ಬಸ್ ಸಂಚಾರ ಶುರುವಾಗಿದ್ದು, ಇದರ ಉಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು.ಬೆಂಗಳೂರಿನ ಬಸ್ಸುಗಳು ರಾಮನಗರಕ್ಕೂ ಸಂಚರಿಸುತ್ತವೆ ಎಂದು ಹೇಳಿದ್ದಾರೆ.
