ಬೆಂಗಳೂರು: ಪ್ರಕೃತಿಯ ನಿಯಮದಂತೆ ಹುಟ್ಟಿದ ಸೂರ್ಯ ಮುಳುಗಲೇಬೇಕು . ಹಾಗೆಯೇ ಬಿಜೆಪಿ ಸರ್ಕಾರಕ್ಕೆ ಕೊನೆಯ ದಿನಗಳು ಶುರುವಾಗಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮಗಾಂಧಿಯ ಹೆಸರನ್ನು ತೆಗೆಯುವುದರ ಮೂಲಕ ಬಿಜೆಪಿ ಅಂತಿಮ ದಿನಕ್ಕೆ ಹತ್ತಿರವಾಗುತ್ತಿದೆ. ಆರ್ಟಿಕಲ್ 21ರ ಮೂಲಕ ಉದ್ಯೋಗಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಸಾಹಸಕ್ಕೆ ಕೈ ಹಾಕಿರುವುದನ್ನು ನೋಡಿದರೆ ಬಿಜೆಪಿಗೆ ಅಂತಿಮ ದಿನಗಳು ಪ್ರಾರಂಬವಾಗುತ್ತಿದೆ ಎಂದು ನನ್ನ ಅಭಿಪ್ರಾಯ ಪಟ್ಟಿದ್ದಾರೆ.
