ಬೆಂಗಳೂರು: ನಟ ದ್ರುವ ಸರ್ಜಾ ವಿರುದ್ದ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸ್ಯಾಂಡಲ್ವುಡ್ ನಟ ದ್ರುವಸರ್ಜಾ 3.15 ಕೋಟಿ ಹಣವನ್ನು ತೆಗೆದುಕೊಂಡು ವಂಚಿಸಿದ್ದಾರೆ ಎಂದು ಸಿನಿಮಾ ನಿರ್ದೇಶಕ ರಾಘವೇಂದ್ರ ಹೆಗಡೆಯವರು ದೂರು ದಾಖಲು ಮಾಡಿದ್ದಾರೆ ಎನ್ನಲಾಗಿದೆ.
ಹೊಸದೊಂದ ಸಿನಿಮಾ ಶೂಟಿಂಗ್ಗೆ ಬರುವುದಾಗಿ 3.15ಕೋಟಿ ಅಡ್ವಾನ್ಸ್ ಹಣವನ್ನು ಪಡೆದುಕೊಂಡು ಶೂಟಿಂಗಿಗೆ ಬರದಿರುವ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
