ಬೀದರ್:‌ ಮಳೆಯಿಂದಾಗಿ ಹಾನಿಗೊಳಗಾದ ಜನಗಳಿಗೆ ಪರಿಹಾರವನ್ನು ಕಲ್ಪಿಸಿಕೊಡಲು ಸಿಎಂ ಸಿದ್ದರಾಮಯ್ಯನವರಿಗೆ ಮನವಿಯನ್ನು ಮಾಡಿದ್ದೇನೆ ಎಂದು ಸಚಿವ ಈಶ್ವರ್‌ ಖಂಡ್ರೆ ಸಹಾಯ ಹಸ್ತವನ್ನು ನೀಡಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಇಂದು ಬೀದರ್ ದಕ್ಷಿಣ ಮತಕ್ಷೇತ್ರದ ಕಾಶೆಂಪೂರ್ ಮತ್ತು ಬುಧೇರಾ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದೆನು. ಅಧಿಕಾರಿಗಳಿಗೆ ಈಗಾಗಲೇ ನಡೆಸಿರುವ ಸಮೀಕ್ಷೆಯ ಜೊತೆಗೆ ಮತ್ತೆ ಸುರಿದ ಮಳೆಯಿಂದಾದ ಹಾನಿಯನ್ನು ತಕ್ಷಣವೇ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆನು. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಹಾನಿ ಸಂಭವಿಸಿರುವುದರಿಂದ, ಜಿಲ್ಲೆಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳವರಿಗೆ ಮನವಿ ಮಾಡಿದ್ದೇನೆ. ಶೀಘ್ರದಲ್ಲೇ ಮಳೆಹಾನಿಗೊಳಗಾದ ಜನರಿಗೆ ಪರಿಹಾರ ವಿತರಿಸಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *