ಚಿತ್ರದುರ್ಗ:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್ಗೆ ನಗರದ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ರಿಲೀಫ್ ಸಿಕ್ಕಿರುವ ವಿಷಯ ಲಭ್ಯವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ತಾಯಿ ರತ್ನಪ್ರಭಾರವರನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ಕೋರ್ಟ್ಗೆ ಮನವಿಯನ್ನು ಸಲ್ಲಿಸಿತ್ತು. ಆದರೆ ರೇಣುಕಾಸ್ವಾಮಿ ತಾಯಿಯ ಹೇಳಿಕೆಗಳಲ್ಲಿ ಗೊಂದಲವಿರುವುದರಿಂದ ಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು.ಆದ್ದರಿಂದ ನಟ ದರ್ಶನ್ಗೆ ರಿಲೀಫ್ ಸಿಕ್ಕಿದೆ ಎನ್ನಲಾಗಿದೆ.
ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿರುವ ಬಿಗ್ ರಿಲೀಫ್ ಆಗಿದೆ. ಇದು ಕಾನೂನು ಮತ್ತು ಸಾಮಾಜಿಕ ದೃಷ್ಟಿಕೋನದಿಂದ ಅತ್ಯಂತ ಮಹತ್ವದ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ನೋಡೊಣ.
