ದಕ್ಷಿಣ ಕನ್ನಡ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಕಾರಣ ನಾಲ್ಕು ಜನರ ಮೇಲೆ ಹೋರಾಟಗಾರ ಸ್ನೇಹಮಯಿ ಕೃಷ್ಣರವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಧರ್ಮಸ್ಥಳದ ಪೊಲೀಸ್ ಸ್ಟೇಷನ್ನಿನಲ್ಲಿ ಯ್ಯೂಟೂಬರ್ ಸಮೀರ್, ಗಿರೀಶ್ ಮಟ್ಟಣ್ಣನವರ್, ಹಿಂದೂ ಮುಖಂಡ ಮಹೇಶ್ ತಿಮರೋಡಿ ಮತ್ತು ಸುಜಾತ್ ಭಟ್ ವಿರುದ್ದ ಹೋರಾಟಗಾರ ಸ್ನೇಹಮಯಿ ಕೃಷ್ಣ ದೂರನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.
